Home » ದ.ಕ ಜಿಲ್ಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದಲೇ ವಾರಾಂತ್ಯ ಕರ್ಫ್ಯೂ ಜಾರಿ , ಜಿಲ್ಲಾಧಿಕಾರಿ ಹೇಳಿಕೆ

ದ.ಕ ಜಿಲ್ಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದಲೇ ವಾರಾಂತ್ಯ ಕರ್ಫ್ಯೂ ಜಾರಿ , ಜಿಲ್ಲಾಧಿಕಾರಿ ಹೇಳಿಕೆ

by ಹೊಸಕನ್ನಡ
0 comments

Hindu neighbor gifts plot of land

Hindu neighbour gifts land to Muslim journalist

ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ಆ. 28 ಹಾಗೂ 29 ರಂದು ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಇಂದು ರಾತ್ರಿ 9 ಗಂಟೆಯಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30 ರ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರುತ್ತದೆ.

ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಅಂಗಡಿ, ಮಳಿಗೆಗಳನ್ನು ತೆರೆಯಬಹುದು ಹಾಗೂ ಬೀದಿ ಬದಿ ವ್ಯಾಪಾರ ಮಾಡಬಹುದು.

ಹಾಗಾಗಿ ಸಾರ್ವಜನಿಕರು ಮಧ್ಯಾಹ್ನದವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಆ ಬಳಿಕ ಅನಗತ್ಯವಾಗಿ ತಿರುಗಾಡಬಾರದು. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ತುರ್ತು ಸೇವೆಗೆ ಅನುಮತಿ ಇದೆ.

banner

ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ಕೇವಲ ಪಾರ್ಸಲ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

You may also like

Leave a Comment