Home News ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ- ಕಾಂಗ್ರೆಸ್ ಕಾಲೆಳೆದ ಮಾಜಿ ಸೀಎಂ ಬಿಎಸ್‌ವೈ

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ- ಕಾಂಗ್ರೆಸ್ ಕಾಲೆಳೆದ ಮಾಜಿ ಸೀಎಂ ಬಿಎಸ್‌ವೈ

Hindu neighbor gifts plot of land

Hindu neighbour gifts land to Muslim journalist

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ.

ಹಾನಗಲ್ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸೀಎಂ, ನಾವು ಮಾಡಿರುವ ಅಭಿವೃದ್ಧಿ ಹೇಳಿಕೊಂಡು ಮತ ಕೇಳ್ತಿದ್ದೇವೆ. ಹಣ, ಹೆಂಡ, ಪ್ರಭಾವ ಬಳಸಿ ವೋಟು ಕೇಳುವ ಕಾಲ ಹೋಗಿದೆ. ಜನ ಈಗ ಬುದ್ಧಿವಂತರಾಗಿದ್ದಾರೆ ಎಂದು ಕಾಂಗ್ರೆಸ್‌ನ ಕಾಲೆಳೆದಿದ್ದಾರೆ.

ಕಾಂಗ್ರೆಸ್ ನವರ ಬುಡಬುಡಿಕೆ ಮಾತುಗಳಿಗೆ ಜನ ಬೆಲೆ ಕೊಡಲ್ಲ. ಕಾಂಗ್ರೆಸ್ ರಾಜಕೀಯ ದೊಂಬರಾಟ ಮಾಡಿ ಜನರ ಮನಸು ಗೆಲ್ಲುವುದು ಆಗಲ್ಲ. ಪ್ರಚಾರದ ವೇಳೆ ಕಾಂಗ್ರೆಸ್ ಹೆಸರು ಹೇಳುವ ಅಗತ್ಯ ಇಲ್ಲ. ಯಾಕಂದ್ರೆ ಜನ ಈಗ ಕಾಂಗ್ರೆಸ್ ನವ್ರನ್ನು ಮರೆತಿದ್ದಾರೆ ಎಂದು ಕೆಣಕಿದರು.