Home » BJP: 2028ರ ವಿಧಾನಸಭಾ ಚುನಾವಣೆ- ಈಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಯಡಿಯೂರಪ್ಪ

BJP: 2028ರ ವಿಧಾನಸಭಾ ಚುನಾವಣೆ- ಈಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಯಡಿಯೂರಪ್ಪ

0 comments

BJP: ಕರ್ನಾಟಕ ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆ ಎಂದು ನಡೆದಿದ್ದು 2028ರ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳು ಬಾಕಿ ಇರುವಾಗಲೇ, ಬಿಜೆಪಿಯ ವರಿಷ್ಠ ಬಿಎಸ್ ಯಡಿಯೂರಪ್ಪ ಅವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಇದು ಬಿಜೆಪಿ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರ ಜನ್ಮ ದಿನದ ಕಾರ್ಯಕ್ರಮ ಫೆಬ್ರುವರಿ 28ರಂದು ಹೊನ್ನಾಳಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಹೊನ್ನಾಳಿಯಲ್ಲಿ ಎಂಪಿ ರೇಣುಕಾಚಾರ್ಯ, ಚನ್ನಗಿರಿ- ಮಾಡಾಳ್ ವಿರೂಪಾಕ್ಷಪ್ಪ, ಹರಿಹರ-ಚಂದ್ರಶೇಖರ ಪೂಜಾರ, ದಾವಣಗೆರೆ ಉತ್ತರ ಲೋಕಕೆರೆ ನಾಗರಾಜ್, ಜಗಳೂರು ಎಸ್ ವಿ ರಾಮಚಂದ್ರ ಹಾಗೂ ಹರಪನಹಳ್ಳಿ-ಕರುಣಾಕರ ರೆಡ್ಡಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದರು. ಚುನಾವಣೆಗೆ ಇನ್ನು 2 ವರ್ಷ ಬಾಕಿ ಇರುವಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಯಡಿಯೂರಪ್ಪ ಘೋಷಣೆ ಮಾಡಿರುವುದು ಹಲವು ನಾಯಕರು ಆಕ್ರೋಶಗೊಳ್ಳುವಂತೆ ಮಾಡಿದೆ.

ಇದರಿಂದ ಪಕ್ಷೀಯ ಮುಖಂಡರು ಯಡಿಯೂರಪ್ಪ ತಿರುಗಿಬಿದ್ದಿದ್ದು, ಹೊನ್ನಾಳಿಯಲ್ಲಿ ಮಾಡಿದ ಘೋಷಣೆಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಮೊದಲೇ ಬಿಜೆಪಿಯಲ್ಲಿ ಮುಸುಕಿನ ಗುದ್ದಾಟಗಳು ನಡೆಯುತ್ತಿದ್ದು, ಇವುಗಳನ್ನು ಬಗೆರಿಸಬೇಕಾದ ಹಿರಿಯ ನಾಯಕ ಯಡಿಯೂರಪ್ಪನವರೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ. 

ಈ ಸಂಬಂಧ ದಾವಣಗೆರೆ ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್‌ ಪಾಟೀಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಯಾವುದೇ ಚರ್ಚೆಗಳನ್ನು ಮಾಡದೇ ಅಭ್ಯರ್ಥಿಗಳ ಹೆಸರನ್ನು ಬಿಎಸ್ ವೈ ಘೋಷಿಸಿದ್ದಾರೆ. ಪಕ್ಷದ ಶಿಷ್ಟಾಚಾರವನ್ನು ಉಲ್ಲಂಘಿಸುವಂತಹ ಹೇಳಿಕೆಯನ್ನು ಯಡಿಯೂರಪ್ಪ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

banner

You may also like