Home » Bantwal : 2028ರ ಚುನಾವಣೆ- ಈಗಲೇ ಬಂಟ್ವಾಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ!!

Bantwal : 2028ರ ಚುನಾವಣೆ- ಈಗಲೇ ಬಂಟ್ವಾಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ!!

0 comments

Bantwal : 2028ರ ವಿಧಾನಸಭಾ ಚುನಾವಣೆಗೆ ಇದೀಗಲೇ ಸಿಎಂ ಸಿದ್ದರಾಮಯ್ಯ ಅವರು ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು – ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಸಿದ್ದರಾಮಯ್ಯ ಅವರು ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಲ್ಲದೆ ರಮಾನಾಥ ರೈ ಅವರು ತಮ್ಮ ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು

You may also like