Home Karnataka State Politics Updates Kichha Sudeep : ಚುನಾವಣೆ ನಡೆಯುವವರೆಗೆ ನಟ ಕಿಚ್ಚ ಸುದೀಪ್ ನಟನೆಯ ಸಿನಿಮಾ, ಟಿವಿ ಶೋ...

Kichha Sudeep : ಚುನಾವಣೆ ನಡೆಯುವವರೆಗೆ ನಟ ಕಿಚ್ಚ ಸುದೀಪ್ ನಟನೆಯ ಸಿನಿಮಾ, ಟಿವಿ ಶೋ ಮತ್ತು ಜಾಹೀರಾತು ನಿಷೇಧಿಸಲು ಜೆಡಿಎಸ್ ಒತ್ತಾಯ

Kichha Sudeep

Hindu neighbor gifts plot of land

Hindu neighbour gifts land to Muslim journalist

Kichha Sudeep : ನಟ ಕಿಚ್ಚ ಸುದೀಪ್ (Kichha Sudeep) ಅವರು ಬಿಜೆಪಿ ಸಪೋರ್ಟ್ ಗೆ ಇಳಿದು ಚುನಾವಣಾ ಅಖಾಡಕ್ಕೆ ಧುಮುಕಿದ ಕಾರಣ ಅವರ ನಟನೆಯ ಸಿನಿಮಾ, ಜಾಹೀರಾತು, ಪೋಸ್ಟರ್ ಹಾಗೂ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಬೇಕು ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರು ಹಾಗೂ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮುಖ್ಯ ಚುನಾವಣಾ (Election commission) ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

‘ಖ್ಯಾತ ಚಲನಚಿತ್ರ ನಟರಾದ ಕಿಚ್ಚ (Kiccha) ಸುದೀಪ್ ಅವರು ಪ್ರಸ್ತುತ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಇವರು ನಟಿಸಿರುವ ಜಾಹೀರಾತು, ಪೋಸ್ಟರ್ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಚುನಾವಣೆ ಮುಗಿಯುವವರೆಗೆ ಟಿವಿ ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆಹಿಡಿಯಬೇಕು. ಸುದೀಪ್ ರ ಭಾವಚಿತ್ರವಿರುವ ಪೋಸ್ಟರ್ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಶಿವಮೊಗ್ಗದ ವಕೀಲರೊಬ್ಬರು ಎರಡು ದಿನಗಳ ಹಿಂದೆಯಷ್ಟೇ ಚುನಾವಣೆ ಆಯೋಗಕ್ಕೆ ಪತ್ರ ಬರೆದು ಸುದೀಪ್ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಗಳಿಗೆ ಪ್ರಚಾರ ಮಾಡುವುದಾಗಿ ತಿಳಿಸಿದ್ದರಿಂದ, ಅವರ ನಟನೆಯ ಚಿತ್ರಗಳನ್ನು ಪ್ರಸಾರ ಮಾಡದಂತೆ ತಡೆಯಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದರು. ಅವರ ವಕೀಲರು ಚುನಾವಣಾ ಅಧಿಕಾರಿಗಳಿಗೆ ನೀಡಿದ ಪತ್ರದಲ್ಲಿ ‘ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿವಿಗಳಲ್ಲಿ ಪ್ರದರ್ಶನವಾಗದಂತೆ ತಡೆಯಬೇಕು. ಸುದೀಪ್ ನಡೆಸಿಕೊಡುವ ಟಿವಿ ಶೋಗಳು ಪ್ರಸಾರವಾಗದಂತೆ ನಿರ್ಭಂದಿಸಬೇಕು. ಅಲ್ಲದೆ ಅವರು ನಟಿಸಿರುವ ಜಾಹೀರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಕಡೆಯಿಂದ ಪತ್ರ ಬರೆಯಲಾಗಿದೆ.

‘ಸುದೀಪ್ ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು ಮತ್ತು ಟಿವಿಶೋಗಳು ಹಾಗೂ ಜಾಹೀರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ. ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು ಒಬ್ಬ ಜವಾಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದೇನೆ’ ಎಂದು ಕೆ.ಪಿ ಶ್ರೀಪಾಲ್ ಪತ್ರ ನೀಡಿದ್ದಾರೆ.

 

ಇದನ್ನು ಓದಿ : Outdoor toilet : ಬಯಲು ಶೌಚದ ವೇಳೆ ಗುಪ್ತಾಂಗದ ಒಳ ನುಸುಳಿದ ಹಾವು, ವೈದ್ಯರು ಹೇಳಿದ್ದೇನು ?!