Home » BJP: ಬೆಂಗಳೂರಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ – ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಹತ್ವದ ನಿರ್ಧಾರ!!

BJP: ಬೆಂಗಳೂರಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ – ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಹತ್ವದ ನಿರ್ಧಾರ!!

0 comments

BJP: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿನ್ನೆ (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿರುವುದಾಗಿ ತಿಳಿಸಿದೆ. ಅಷ್ಟೇ ಅಲ್ಲದೆ ಜೆಡಿಎಸ್ ಜೊತೆಗೆ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.

ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದೆ. ಅವೆಂದರೆ ಸರ್ಕಾರದ ವೈಫಲ್ಯ, ಅಬಕಾರಿ ಹಗರಣ, ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ, ಒಳಮೀಸಲು ವರ್ಗೀಕರಣ ಅನ್ಯಾಯ, ಎ ಖಾತಾ, ಬಿ ಖಾತಾ ಮೂಲಕ ಭ್ರಷ್ಟಾಚಾರ, ಕಸದ ಅವ್ಯವಹಾರ ಸೇರಿ ಆರು ನಿರ್ಣಯಗಳನ್ನು ಮಂಡನೆ ಮಾಡಲಾಗಿದೆ. 

ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರವನ್ನು ಸಮಾರೋಪದಲ್ಲಿ ಪ್ರಸ್ತಾಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ತಲೆಬಾಗಿ ಸಾರ್ವಜನಿಕ ಚರ್ಚೆಗೆ ಅವಕಾಶ ಕೊಡದಂತೆ ಸೂಚನೆ ನೀಡಿದರು. ಇದೇ ವೇಳೆ, ಕಾರ್ಯಕಾರಿಣಿ ಸಮಾರೋಪ ಭಾಷಣ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಅಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಮಾಹಿತಿ ನೀಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಲು ಸಂಘಟನೆ ಮಾಡಬೇಕು ಎಂದು ಸೂಚಿಸಿದ್ದಾರೆ.

You may also like