Home Karnataka State Politics Updates By Election: ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ!!

By Election: ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ!!

Hindu neighbor gifts plot of land

Hindu neighbour gifts land to Muslim journalist

 

BY Election: ರಾಜ್ಯದಲ್ಲಿ ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ(By Election) ಘೋಷಣೆ ಆಗಿದೆ. ಎರಡು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಒಂದು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ.

ಹೌದು, ಶಿಗ್ಗಾವಿ(Shiggavi), ಸಂಡೂರು(Sandoor) ಹಾಗೂ ಚನ್ನಪಟ್ಟಣ(Channapattana) ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪಕ್ಷಗಳು, ಚುನಾವಣೆ ಗೆಲ್ಲಲು ಅಳೆದು ತೂಗಿ ಅಭ್ಯರ್ಥಿ ಆಯ್ಕೆಯನ್ನ ಮಾಡುತ್ತಿದ್ದಾರೆ. ಅಂತೆಯೇ ಈಗ ಕಾಂಗ್ರೆಸ್ ಕೂಡ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ(CM Siddaramaiah) ಅವರು ಮೂರು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಸಚಿವರುಗಳಿಗೆ ಟಾಸ್ಟ್‌ ನೀಡಿದ್ದಾರೆ. ಇದರ ಜೊತೆಗೆ ಅವರು ಮೈಸೂರಿನಲ್ಲಿ ಸಂಡೂರು ಅಭ್ಯರ್ಥಿಯನ್ನ ಘೋಷಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ(Mysore) ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು ಎಂದರು. ಅಲ್ಲದೆ ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಹೇಳಿದರು.