Home Karnataka State Politics Updates ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ...

ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

Hindu neighbor gifts plot of land

Hindu neighbour gifts land to Muslim journalist

ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ.

ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ ಎಂಬುದು ಸತ್ಯದ ಸಂಗತಿ. ಅಂತೆಯೇ ಇದೀಗ ಪಂಜಾಬ್‌ನಲ್ಲಿಯೂ ಐವರು ಪ್ರಮುಖ ನಾಯಕರು ಸಾಮೂಹಿಕವಾಗಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದು, ಬಿಜೆಪಿ ಸೇರಲು ಮುಂದಾಗಿರುವುದು ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಕಳೆದ ತಿಂಗಳು ಪಂಜಾಬ್‌ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಾಖರ್ ಅವರು ಬಿಜೆಪಿ ಸೇರಿದ ನಂತರ ಕಾಂಗ್ರೆಸ್‌ನಿಂದ ಸಾಮೂಹಿಕ ವಲಸೆ ಪ್ರಾರಂಭವಾಗಿದೆ. ಪಂಜಾಬ್ ಸಂಪುಟದ ಮಾಜಿ ಸಚಿವರಾದ ಗುರುಪ್ರೀತ್ ಸಿಂಗ್ ಕಂಗಾರ್, ಬಲ್ಬೀರ್ ಸಿಂಗ್ ಸಿಧು, ರಾಜ್ ಕುಮಾರ್ ವೆರ್ಕಾ, ಸುಂದರ್ ಶಾಮ್ ಅರೋರಾ ಮತ್ತು ಮಾಜಿ ಶಾಸಕ ಕೇವಲ್ ಸಿಂಗ್ ಧಿಲ್ಲೋನ್ ಅವರಿಂದು ಬಿಜೆಪಿ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮುಂಬರುವ ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಆರಂಭಿಸಿದೆ. ಅದಕ್ಕಾಗಿಯೇ ಕಾರ್ಯಕರ್ತರ ಸೇವೆ ಗಮನಿಸಿ 50 ವರ್ಷದೊಳಗಿನ ಶೇ.50 ಮಂದಿಗೆ ಮುಂಬರುವ ವಿಧಾನಸಭೆಯಲ್ಲಿ ಟಿಕೆಟ್ ನೀಡಲು ನಿರ್ಧರಿಸಿದೆ. ಅಲ್ಲದೆ, ಜೆಡಿಎಸ್, ಬಿಜೆಪಿಗೆ ಸರಿಸಮನಾಗಿ ಪಕ್ಷಕ್ಕೆ ಯುವ ಸಮೂಹವನ್ನು ಸೆಳೆಯುವುದೂ ಇದರ ಉದ್ದೇಶವಾಗಿದೆ.