Home » ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ,ಸಲೀಂ ಪಕ್ಷದಿಂದ ಉಚ್ಚಾಟನೆ

ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ,ಸಲೀಂ ಪಕ್ಷದಿಂದ ಉಚ್ಚಾಟನೆ

by Praveen Chennavara
2 comments

Hindu neighbor gifts plot of land

Hindu neighbour gifts land to Muslim journalist

ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಕೆಪಿಸಿಸಿ ವೇದಿಕೆಯಲ್ಲಿಯೇ ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಪಡೆದುಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಿದ್ದರು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಲೆಕ್ಷನ್ ಪಡೆದುಕೊಳ್ಳುತ್ತಿರುವ ಬಗ್ಗೆ ಆರೋಪಿಸಿ ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು. ಪಕ್ಷದ ಅಧ್ಯಕ್ಷರ ವಿರುದ್ಧವೇ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತಲ್ಲದೇ ಆಡಳಿತ ಪಕ್ಷ ಬಿಜೆಪಿ ನಾಯಕರ ಕಟುಟೀಕೆಗಳಿಗೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಭಯ ನಾಯಕರ ವಿರುದ್ಧ ಕ್ರಮ ಕೈಗೊಂಡಿದ್ದು, ಸಲೀಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆಗೊಳಿಸಿದ್ದರೆ, ವಿ.ಎಸ್. ಉಗ್ರಪ್ಪ ಅವರನ್ನು ಕಾಂಗ್ರೆಸ್ ನಿಂದಲೇ ಅಮಾನತುಗೊಳಿಸಲಾಗಿದೆ.

You may also like

Leave a Comment