Home » Basavana Gowda Yatnal: ಮುಂದಿನ ಚುನಾವಣೆಯಲ್ಲಿ JDS ನಿಂದ ಸ್ಪರ್ಧೆ? ಬಿಗ್ ಅಪ್ಡೇಟ್ ಕೊಟ್ಟ ಯತ್ನಾಳ್

Basavana Gowda Yatnal: ಮುಂದಿನ ಚುನಾವಣೆಯಲ್ಲಿ JDS ನಿಂದ ಸ್ಪರ್ಧೆ? ಬಿಗ್ ಅಪ್ಡೇಟ್ ಕೊಟ್ಟ ಯತ್ನಾಳ್

0 comments

Hindu neighbor gifts plot of land

Hindu neighbour gifts land to Muslim journalist

Basavana Gowda Yatnal: ವಿಜಯಪುರ ಶಾಸಕ ಹಾಗೂ ಬಿಜೆಪಿಯ ಉಚ್ಚಾಟಿತ ನಾಯಕನಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆಗೆ ಇಳಿಯುತ್ತಾರೆ, ಸದ್ಯದಲ್ಲೇ ಜೆಡಿಎಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಇದೀಗ ಸ್ವತಹ ಯತ್ನಾಳ್ ಅವರೇ ಸ್ಪಷ್ಟೀಕರಣ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ತಾವು ಜೆಡಿಎಸ್‌ಗೆ ಹೋಗುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಅಲ್ಲದೆ ಬಿಜೆಪಿಯನ್ನೇ ರಿಪೇರಿ ಮಾಡುವುದಾಗಿ ಹೇಳಿದ್ದು,ನಾವು ಯಾವ ಕಾಲಕ್ಕೂ ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಶಕ್ತಿ ಇದೆ. ಬಿಜೆಪಿಯ ಒಂದು ಶಕ್ತಿ, ಕುಮಾರಸ್ವಾಮಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕೆ ನಮಗೆ ತುಮಕೂರು ಗೆಲುವಾಗಿದೆ. ಮೈಸೂರು, ಕೋಲಾರ ಬೆಂಗಳೂರು ಗ್ರಾಮಾಂತರ ಹಾಗೂ ಚಿತ್ರದುರ್ಗಗಳನ್ನೂ ಗೆಲ್ಲೋಕೆ ಆಗಿದೆ ಎಂದ ಅವರು, ಇದಕ್ಕೆ ನೇರವಾಗಿ ಕುಮಾರಸ್ವಾಮಿ ಹಾಗೂ ದೇವಗೌಡರ ಸಹಕಾರವಿದೆ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು, ಸರ್ಕಾರ ಮಾಡಬೇಕಂತಿದೆ. ನಾವು ಯಾವ ಕಾಲಕ್ಕೂ ಜೆಡಿಎಸ್ ಗೆ ಹೋಗೋದಿಲ್ಲ ಇದು ನನ್ನ ವೈಯಕ್ತಿಕ ಹೇಳಿಕೆ ಎಂದರು.

You may also like