ನಾಡಿನ ನೂತನ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ರಾಜ್ಯದ ಜನತೆಗೆ ಆರು ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ.


ಹೌದು, ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ನಡೆಸಿ ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅನ್ನು ವಿತರಿಸಲಾಗುವುದು ಎಂದು ಘೋಷಣೆ ಹೊರಡಿಸಿದರು. ಇದರ ಜೊತೆಗೆ ಇನ್ನು ಐದು ಹೊಸ ಘೋಷಣೆಗಳನ್ನು ಘೋಷಿಸಿದ್ದು ಒಟ್ಟು ಆರು ಘೋಷಣೆಗಳನ್ನು ಮಾಡಿದಂತಾಗಿದೆ. ಅವುಗಳು ಇಂತಿವೆ.
ಡಿಕೆಶಿಯ ಮೊದಲ ಘೋಷಣೆಗಳು
* ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
* ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ
* 2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್.
* ಪ್ರತಿ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ.
* ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ private employment exchange centre ಸ್ಥಾಪನೆ.
* ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

