Home Karnataka State Politics Updates ಮೊದಲ ಬಾರಿಗೆ ರಾಜಕೀಯ ಪಕ್ಷಗಳ ಹೆಸರು ಹೇಳಿ ಭವಿಷ್ಯ ನುಡಿದ ದೈವ !! | ಕಾಂಗ್ರೆಸ್-ಬಿಜೆಪಿ...

ಮೊದಲ ಬಾರಿಗೆ ರಾಜಕೀಯ ಪಕ್ಷಗಳ ಹೆಸರು ಹೇಳಿ ಭವಿಷ್ಯ ನುಡಿದ ದೈವ !! | ಕಾಂಗ್ರೆಸ್-ಬಿಜೆಪಿ ಬಗ್ಗೆ ದೈವ ಹೇಳಿದ ಭವಿಷ್ಯದಲ್ಲೇನಿದೆ ಗೊತ್ತಾ ??

Hindu neighbor gifts plot of land

Hindu neighbour gifts land to Muslim journalist

ದೈವ ನರ್ತನಗಳಲ್ಲಿ ದೈವಗಳು ಭವಿಷ್ಯ ನುಡಿಯುವುದು ಪದ್ಧತಿ. ದೈವ ನುಡಿಗಳಲ್ಲಿ ತುಂಬಾನೇ ನಂಬಿಕೆಯಿದೆ. ದೈವ ನುಡಿಕಟ್ಟುಗಳು ಮುಂದೆ ನಡೆಯಲಿರುವ ಒಳಿತು, ಕೆಡಕುಗಳ ಬಗ್ಗೆ ಎಚ್ಚರಿಕೆ ನೀಡುತ್ತದೆ. ಆದರೆ ಇದೇ ಮೊದಲ ಬಾರಿ ರಾಜಕೀಯ ಪಕ್ಷಗಳ ಹೆಸರು ಹೇಳಿ ದೈವ ಭವಿಷ್ಯ ನುಡಿದಿದ್ದು, ರಾಜಕಾರಣಿಗಳಿಗೆ ಶಾಕ್ ನೀಡಿದೆ.

ವಿಜಯಪುರದ ಚಡಚಣ ತಾಲೂಕಿನ ಮಕಣಾಪುರದ ಸೋಮಲಿಂಗ ದೇವಸ್ಥಾನದ ಕಲ್ಲೂರುಸಿದ್ಧ ಭವಿಷ್ಯ ಬಹಳ ಪ್ರಸಿದ್ಧ. ಮಕಣಾಪುರ ಗ್ರಾಮದಲ್ಲಿ ಪ್ರತಿ ವರ್ಷ ಯುಗಾದಿ ಬಳಿಕ ದೈವ ಭವಿಷ್ಯ ನುಡಿಯುತ್ತೆ. ಶಿವನ ಅವತಾರ ಸೋಮಲಿಂಗ ದೇವರ ಸೇವಕನಾಗಿರುವ ಪವಾಡ ಪುರುಷ ಕಲ್ಲೂರುಸಿದ್ಧ ಭವಿಷ್ಯವನ್ನು ಜನರು ನಂಬುತ್ತಾರೆ. ನಾಲಿಗೆ ಮೇಲೆ ಶಿವನೆ ಕುಳಿತು ಭವಿಷ್ಯ ನುಡಿಯುತ್ತಾನೆ ಎಂಬ ನಂಬಿಕೆಯನ್ನು ಭಕ್ತರು ಹೊಂದಿದ್ದಾರೆ.

ದೈವ ಹೇಳಿದ್ದೇನು?

ಕೈಯ್ಯಲ್ಲಿ ಬೆಳ್ಳಿ ತ್ರಿಶೂಲ, ಮುಖಕ್ಕೆ ದೇವರ ಮುಖವಾಡ ಧರಿಸಿ ಭವಿಷ್ಯವನ್ನು ನುಡಿಯುತ್ತದೆ. ಈ ವೇಳೆ ದೈವ, ಕಾಂಗ್ರೆಸ್-ಬಿಜೆಪಿ ತಾ ಮುಂದು ನಾ ಮುಂದು ಎನ್ನುತ್ತವೆ. ಎರಡು ಪಕ್ಷಗಳ ನಡುವೆ ಭಾರೀ ತಿಕ್ಕಾಟ ನಡೆಯುತ್ತದೆ
ಎಂದು ಭವಿಷ್ಯವನ್ನು ಕಲ್ಲೂರುಸಿದ್ಧ ದೈವ ನುಡಿದಿದೆ.
ಎರಡು ಪಕ್ಷಗಳು ನಾ ಮುಂದು, ತಾ ಮುಂದು ಎನ್ನುವಾಗ ಜಗತ್ತೇ ಅಲ್ಲೋಲ ಕಲ್ಲೋಲ ಆಗುತ್ತದೆ. ಎರಡು ಪಕ್ಷದ ತಿಕ್ಕಾಟದಿಂದ ಅಲ್ಲೋಲ ಕಲ್ಲೋಲ. ಬಿಜೆಪಿ ಜನರಿಗೆ ಹೊಂದಿಕೊಂಡು ಹೋದರೆ ನಿಶಾನೆ(ಧ್ವಜ/ಗೆಲುವು) ಹಚ್ತೇನೆ. ಇಲ್ಲಾಂದ್ರೆ ಕಡಿದು ಮೂರು ತುಂಡು ಮಾಡ್ತೀನಿ ಎಂದು ದೈವ ನುಡಿದಿದೆ.

ಬಿಜೆಪಿ ಜನರೊಂದಿಗೆ ಹೊಂದಾಣಿಕೆ ಆದ್ರೆ ಗೆಲುವು ಎಂದು ಬರುತ್ತೆ. ಈ ವೇಳೆ ಭೂಕಂಪನ ಭವಿಷ್ಯವನ್ನು ಕಲ್ಲೂರುಸಿದ್ಧ ದೈವ ನುಡಿದಿದೆ. ನಾಲ್ಕು ಮೂಲೆ ಸೋಸಿ(ಶೋಧಿಸಿ) ನೋಡುದ್ರಾಗ ಕತ್ತಲೆ ಬಿತ್ತಲೆ. ಭೂತ್ಯಾನ ಹಚ್ಚಿ ಬಯಲು ಮಾಡಿದ್ರ ಎರಡು ಮೂಲೆ ತೊಟ್ಟಲಿಟ್ಟು ತೂಗಿತು ಎನ್ನುವ ಮೂಲಕ ಎರಡು ಭಾಗದಲ್ಲಿ ಭೂಕಂಪ ಆಗಬಹುದು ಎಂದಿದೆ.