HomeKarnataka State Politics UpdatesJagadish shettar: ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ: ಜಗದೀಶ್ ಶೆಟ್ಟರ್ ಖಡಕ್...

Jagadish shettar: ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ: ಜಗದೀಶ್ ಶೆಟ್ಟರ್ ಖಡಕ್ ಪ್ರತಿಕ್ರಿಯೆ

Hindu neighbor gifts plot of land

Hindu neighbour gifts land to Muslim journalist

Ex CM Jagadish Shettar: ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ನಮ್ಮ ಬಲವಂತವಾಗಿ ಮನೆಯಿಂದ ಹೊರಹಾಕಿದ್ದಾರೆ ಇದು ಭಾರತೀಯ ಜನತಾ ಪಾರ್ಟಿಯ ಶಾಸಕ ಸ್ಥಾನ ಮತ್ತು ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಜಗದೀಶ್ ಶೆಟ್ಟರ್ (Ex CM Jagadish Shettar) ಕೊಟ್ಟ ಖಡಕ್ ಪ್ರತಿಕ್ರಿಯೆ.

ನಾನೀಗ ಹುಬ್ಬಳ್ಳಿಗೆ ಹೋಗಿ ನನ್ನ ಬೆಂಬಲಿಗರು, ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಮೂಲ ಬಿಜೆಪಿಗರನ್ನು ಪಕ್ಷದಿಂದ ಹೊರಹಾಕುವ ಮೂಲೆಗುಂಪು ಮಾಡುವ ಕೆಲಸ ನಡೆಯುತ್ತಿದೆ. ಬಿಜೆಪಿ ಪಕ್ಷದ ಮೇಲೆ ನನಗೆ ಸಿಟ್ಟಿಲ್ಲ, ಬೇಸರ ಕೂಡಾ ಇಲ್ಲ. ಆದರೆ ಕೆಲವರಿಂದಾಗಿ ಪಕ್ಷ ಹಾಳಾಗುತ್ತಿದೆ, ಕೆಲವರ ಷಡ್ಯಂತ್ರದಿಂದ ನಾಯಕರುಗಳಿಗೆ ತೊಂದರೆಯಾಗುತ್ತಿದೆ ಎಂದವರು ಹೇಳಿದ್ದಾರೆ.

ನನಗೇಕೆ ಟಿಕೆಟ್ ನೀಡಿಲ್ಲ:
ನಾನು ಕಳೆದ ಬಾರಿ ಬೊಮ್ಮಾಯಿಯವರು ಮುಖ್ಯಮಂತ್ರಿಯಾದಾಗ ಹೊಸ ಸಚಿವ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನ ಬೇಡವೆಂದು ನಾನೇ ಹಿಂದೆ ಸರಿದಿದ್ದೆ. 2 ವರ್ಷ ಶಾಸಕನಾಗಿ ಕ್ಷೇತ್ರದಲ್ಲಿ ಅತ್ಯಂತ ಶಾಂತವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ನನ್ನ ಮೇಲೆ ಯಾವುದೇ ಕೇಸುಗಳಿಲ್ಲ, ನಾನು ರೌಡಿ ಶೀಟರ್ ಅಲ್ಲ, ನನ್ನ ವಿರುದ್ಧ ಯಾವುದೇ ಸಿಡಿ ಹಗರಣ ಕೇಸುಗಳೂ ಕೂಡ ಇಲ್ಲ, ನನಗೆ 75 ವರ್ಷ ಕೂಡಾ ವಯಸ್ಸಾಗಿಲ್ಲ. ಹಾಗಿದ್ದರೂ ನನಗೆ ಈ ಬಾರಿ ಟಿಕೆಟ್ ಏಕೆ ನಿರಾಕರಿಸಿದರು ಎಂಬುದು ನನಗೆ ಅಚ್ಚರಿಯಾಗುತ್ತದೆ ಎಂದವರು ಬೇಸರ ವ್ಯಕ್ತಪಡಿಸಿದ್ದಾರೆ.

ಈಗ ನನಗೆ ಯಾವುದೇ ದೊಡ್ಡ ಆಕಾಂಕ್ಷೆಗಳಿಲ್ಲ, ಸಿಎಂ ಹುದ್ದೆ ಅಥವಾ ಕೇಂದ್ರ ಸರ್ಕಾರದಲ್ಲಿ, ಪಕ್ಷದ ಕೇಂದ್ರ ಮಟ್ಟದಲ್ಲಿ ಹುದ್ದೆ ಬೇಕೆಂದು ನಾನು ಕೇಳಲಿಲ್ಲ. ನಾನು ಕೇಳಿದ್ದು ಕೇವಲ ಬಿಜೆಪಿಯಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್. ಅದನ್ನು ನಿರಾಕರಿಸಿದ್ದು ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಬಿಎಸ್ ವೈ, ಅನಂತ್ ಕುಮಾರ್ ಜೊತೆಗೆ ಸೇರಿ ನಾನು ಕೂಡ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದೆ. ಈ ಬಾರಿ ಟಿಕೆಟ್ ಇಲ್ಲವೆಂದಾಗ ಬಿಎಸ್ ವೈಯವರು ನಿಮಗೆ ಹೀಗಾಗಬಾರದಿತ್ತು ಎಂದರು. ಇಂದು ಮಾಧ್ಯಮಗಳ ಮುಂದೆ ಅವರು ಬೇರೆ ರೀತಿ ಮಾತನಾಡುತ್ತಿದ್ದಾರೆ. ಬಹುಶಃ ಕೇಂದ್ರದ ವರಿಷ್ಠರ ಸೂಚನೆ ಮೇರೆಗೆ ಮಾತನಾಡುತ್ತಿರಬಹುದು ಎಂದು ಜಗದೀಶ್ ಶೆಟ್ಟರ್ ಹೇಳಿದರು.

RELATED ARTICLES

Most Popular

Recent Comments