Home Karnataka State Politics Updates V. somanna: ನನಗೆ ರಾಜ್ಯಾಧ್ಯಕ್ಷ ಪಟ್ಟ ಬೇಕೇ ಬೇಕು- ಪಟ್ಟು ಹಿಡಿದ ಸೋಮಣ್ಣ!! ಕೇಳಿದವ್ರಿಗೆಲ್ಲಾ ಅಧ್ಯಕ್ಷ...

V. somanna: ನನಗೆ ರಾಜ್ಯಾಧ್ಯಕ್ಷ ಪಟ್ಟ ಬೇಕೇ ಬೇಕು- ಪಟ್ಟು ಹಿಡಿದ ಸೋಮಣ್ಣ!! ಕೇಳಿದವ್ರಿಗೆಲ್ಲಾ ಅಧ್ಯಕ್ಷ ಸ್ಥಾನ ಕೊಡೋಕಾಗಲ್ಲ ಎಂದ ನಾಯಕರು!!

Hindu neighbor gifts plot of land

Hindu neighbour gifts land to Muslim journalist

V. somanna: ವಿಧಾನಸಭಾ ಚುನಾವಣೆಯಲ್ಲಿ(Assembly election) ಎರಡೂ ಕ್ಷೇತ್ರಗಳಲ್ದಿ ಹೀನಾಯವಾಗಿ ಸೋಲನುಭವಿಸಿರುವ ಬಿಜೆಪಿ ನಾಯಕ ವಿ ಸೋಮಣ್ಣ(V Somanna) ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದು, ಬಿಜೆಪಿ(BJP) ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿಯೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ಹೌದು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ(Karnataka Assembly election) ಸೋತು ಸುಣ್ಣವಾಗಿರುವ ಬಿಜೆಪಿಯಲ್ಲಿ ಈಗ ವಿಪಕ್ಷ ನಾಯಕನ ಆಯ್ಕೆಯ ಕಸರತ್ತು ಆರಂಭವಾಗಿದೆ. ಅದರಲ್ಲಿಯೂ ಚಾಮರಾಜನಗರ(Chamaraja nagar) ಹಾಗೂ ವರುಣಾ(Varuna) ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡಿ, ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ(Benglore) ಮಾತನಾಡಿದ ಅವರು, ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಹೇಳಿ ಬಂದಿದ್ದೇನೆ. ನಾನು 45 ವರ್ಷ ರಾಜಕಾರಣ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿದ್ದೇನೆ. ಪತ್ರವನ್ನು ಕೂಡ ನಾನು ಬರೆದಿದ್ದೇನೆ. ಪಕ್ಷ ಕೊಟ್ಟ ಎಲ್ಲ ಟಾಸ್ಕ್‌ಗಳನ್ನು ಸ್ವೀಕಾರ ಮಾಡಿ ಅತ್ಯಂತ ಶ್ರಮಪಟ್ಟು ಎಲ್ಲವನ್ನೂ ನಿರ್ವಹಣೆ ಮಾಡಿದ್ದೇನೆ ಎಂದು ತಿಳಿಸಿದರು.

ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಕೇಳಿದ್ದು ನಿಜ. ನನಗೆ 100 ದಿನ ಅವಕಾಶ ನೀಡಿದರೆ ಸಾಕು. ಒಬ್ಬ ರಾಜ್ಯಾಧ್ಯಕ್ಷ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೋರಿಸುವೆ. ರಾಜ್ಯಾಧ್ಯಕ್ಷ ಹುದ್ದೆ ಉದ್ಯೋಗ ಅಲ್ಲ. ನಾನು ನನ್ನ ಅನುಭವ ಬಳಸಿ ಕೆಲಸ ಮಾಡುತ್ತೇನೆ. ಅನಾನುಕೂಲ ಆದಲ್ಲಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ಅವಕಾಶ ನೀಡಿದರೆ ಕೆಲಸ ಮಾಡ್ತೇನೆ. ಪ್ರಧಾನಿಗಳ ಹೊರತು ಪಡಿಸಿ ಎಲ್ಲಾರಿಗೂ ಭೇಟಿ ಮಾಡಿದ್ದೇನೆ. ಅಮಿತ್ ಶಾ(Amith sha), ಜೆಪಿ ನಡ್ಡಾ(J P nadda) ಎಲ್ಲಾರನ್ನೂ ಭೇಟಿ ಮಾಡಿದ್ದೇನೆ. ಯಡಿಯೂರಪ್ಪ ಮನೆಗೂ ಹೋಗ್ತೇನೆ’ ಎಂದು ಹೇಳಿದ್ದಾರೆ.

ಅಲ್ಲದೆ ರಾಜ್ಯದಲ್ಲಿ ನನ್ನಷ್ಟು ಓಪನ್ ಯಾರು ಇಲ್ಲ. ನಂಗೆ ಅವಕಾಶ ನೀಡಿದ್ರೆ ಗಾಂಭೀರ್ಯದಿಂದ ಕೆಲಸ ಮಾಡ್ತೇನೆ. 100 ದಿನ ನನಗೆ ಅವಕಾಶ ಕೊಟ್ಟು ನೋಡಿ. ನಾನು ಚುನಾವಣೆಗೆ ಮುನ್ನವೇ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ. ನನಗೆ ನೂರು ದಿನ ಕೊಡಲಿ. ನಾನೇನು ಹೇಡಿ ಅಲ್ಲ. ನಾನು ಯಾವುದೇ ಹುದ್ದೆ ತೆಗೆದುಕೊಳ್ಳುವುದಾದರೂ ಅದನ್ನು ಚಾಲೆಂಜ್ ಆಗಿ ತೆಗೆದುಕೊಳ್ಳುತ್ತೇನೆ. ಅಶೋಕ್(R Ashok) ರಾಜ್ಯಾಧ್ಯಕ್ಷ ಆದರೆ ಬೇಡ ಅಂತೀವಾ? ನನ್ನ ಕಾರ್ಯವೈಖರಿಯೇ ಬೇರೆ. ನಾನು ತಗೊಂಡಿರುವ ರಿಸ್ಕ್ ಇವರು ಯಾರು ತಗೊಂಡಿಲ್ಲ. ಕನಕಪುರದಲ್ಲಿ ಅಶೋಕ್ ರಿಸ್ಕ್ ತಗೊಂಡಿಲ್ಲ ಎಂದು ಜನರೇ ಮಾತಾಡಿಕೊಳ್ತಿದ್ದಾರೆ. ನಾನು ಪಕ್ಷದಲ್ಲಿ ತಗೊಂಡಿರೋ ಒಂದು ಚಾಲೆಂಜ್‌ನ್ನು ಇವರು ಯಾವುದಾದರೂ ಒಂದು ತಗೊಂಡಿದ್ದೀರಾ ಕೇಳಿ ಎಂದು ಅಶೋಕ್‌ ವಿರುದ್ಧ ಗುಡುಗಿದರು.