Karnataka Govt : ಮಧ್ಯಪ್ರಾಚ್ಯದಲ್ಲಿ ಯುದ್ಧಭೀತಿ ಶುರುವಾಗಿರುವ ಕಾರಣ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಸದ್ಯಕ್ಕೆ ತೈಲದರ ಏರಿಕೆ ಇಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು. ಈ ವಿಚಾರ ಕೇಳಿ ನಿರಾಳ ಪಟ್ಟುಕೊಳ್ಳುವ ಹೊತ್ತಿನಲ್ಲಿಯೇ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ.

ಯಸ್, ಕರ್ನಾಟಕ ಸರ್ಕಾರವು ತನ್ನ 2026 ನೇ ಸಾಲಿನ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಲು ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳುವೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ.
ಗ್ಯಾರೆಂಟಿ ಯೋಜನೆಗಳ ಹೊಡೆತದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರವು ಇದೀಗ ಆದಾಯದ ಮೂಲಗಳನ್ನು ಹುಡುಕುತ್ತಿದೆ. ಹೀಗಾಗಿ ಪೆಟ್ರೋಲ್ ಹಾಗೂ ಡೀಸೆಲ್ಗಳ ಮೇಲೆ ಹೆಚ್ಚುವರಿಯಾಗಿ ಮಾರಾಟ ತೆರಿಗೆ ಹೇರುವುದು ಅನಿವಾರ್ಯವಾಗುವ ಸಾಧ್ಯತೆ. ಹಣಕಾಸು ಇಲಾಖೆ ಅಧಿಕಾರಿಗಳ ಜತೆಗೆ ಕಳೆದ ಕೆಲ ದಿನಗಳಿಂದ ಪ್ರತ್ಯೇಕ ಚರ್ಚೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಈ ಪ್ರಸ್ತಾಪವೊಂದು ಈಗಾಗಲೇ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ.
ಎಷ್ಟು ಹೆಚ್ಚಾಗಬಹುದು?
ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 1 ರೂ. ಹೆಚ್ಚುವರಿ ಮಾರಾಟ ತೆರಿಗೆ ವಿಧಿಸುವುದರಿಂದ ತಕ್ಕಮಟ್ಟಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ವೇಗ ನೀಡಬಹುದೆಂದು ಚರ್ಚಿಸಲಾಗುತ್ತಿದೆ. ಆದರೆ, ಅದು ಇನ್ನೂ ಅಂತಿಮ ನಿರ್ಧಾರದ ಹಂತಕ್ಕೆ ಬಂದಿಲ್ಲ. ಇದರಿಂದ ಸಾರ್ವಜನಿಕ ವಿರೋಧ ತೀವ್ರವಾಗಬಹುದೆಂಬ ಸಲಹೆಯೂ ವ್ಯಕ್ತವಾಗಿದೆ.

