Home Karnataka State Politics Updates Karnataka state wrestling: ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ...

Karnataka state wrestling: ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ

Karnataka state wrestling

Hindu neighbor gifts plot of land

Hindu neighbour gifts land to Muslim journalist

ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ

ಅಧ್ಯಕ್ಷರು ಸಂಜಯ್‌ ಕುಮಾರ್‌ ಸಿಂಗ್‌, ಹಿರಿಯ ಉಪಾಧ್ಯಕ್ಷರು ದೇವೇಂದರ್‌, ಉಪಾಧ್ಯಕ್ಷರು ಅಸಿತ್‌ ಕುಮಾರ್‌ ಸಹ, ಜಯಪ್ರಕಾಶ್‌, ಕಾರ್‍ತರ್‌ ಸಿಂಗ್‌, ಎನ್‌.ಫೋನಿ

ಪ್ರಧಾನ ಕಾರ್ಯದರ್ಶಿ ಪ್ರೇಮ್‌ ಚಂದ್‌ ಲೊಚಬ್‌, ಕೋಶಾಧಿಕಾರಿ ಸತ್ಯಪಾಲ್‌ ಸಿಂಗ್‌ ದೇಶ್‌ವಾಲ್‌, ಜಂಟಿ ಕಾರ್ಯದರ್ಶಿ ಬೆಳ್ಳಿಪ್ಪಾಡಿ ಗುಣರಂಜನ್‌ ಶೆಟ್ಟಿ, ಆರ್‌.ಕೆ.ಪುರುಶೋತ್ತಮ್‌, ಕಾರ್ಯಕಾರಿ ಸಮಿತಿಯ ಸದಸ್ಯರು ಎಮ್‌.ಲೋಗನಾಥನ್‌, ನೈವಿಕೌಲಿ ಖಾತ್ಸು, ಪ್ರಶಾಂತ್‌ ರೈ, ರಜನೀಶ್‌ ಕುಮಾರ್‌, ಉಮ್ಮೆದ್‌ ಸಿಂಗ್.

ಇದನ್ನು ಓದಿ: Mumbai Indians : ತಂಡದ ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮರನ್ನು ಯಾಕೆ ಇಳಿಸಿದ್ವಿ ಗೊತ್ತಾ?! ಶಾಕಿಂಗ್ ಕಾರಣ ಬಿಚ್ಚಿಟ್ಟ ಮುಂಬೈ ಇಂಡಿಯನ್ಸ್ !!

*ಪುತ್ತೂರಿನ ಕಣ್ಮಣಿ ಕರ್ನಾಟಕದ ಜನರ ಪ್ರೀತಿಪಾತ್ರರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ

 

ದಕ್ಷಿಣಕನ್ನಡ ಜಿಲ್ಲೆಯ ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲು ಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಗಳ ಸುಪುತ್ರ ಹಾಗೂ ಡಾ.ಸಾಯಿ ರಮೇಶ್‌ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಯವರ ಸಹೋದರ ಬಿ.ಗುಣರಂಜನ್ ಶೆಟ್ಟಿ ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದಲ್ಲಿ ಜನಿಸಿ, ಉರಮಾಲು ಗುತ್ತು ನಿವಾಸಿಯಾಗಿರುವ ಇವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುತ್ತಾರೆ. ತಮ್ಮ ವಿದ್ಯಾಭ್ಯಾಸವನ್ನು ಬೆಂಗಳೂರಿನಲ್ಲಿ ಮಾಡಿರುವ ಬಿ. ಗುಣರಂಜನ್‌ ಶೆಟ್ಟಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿರುತ್ತಾರೆ.

ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್‌ ಬೆಂಗಳೂರು, ಐ ಕ್ಯಾರ್‌ ಬ್ರಿಗೇಡ್‌, ಐ ಕ್ಯಾರ್‌ ಫೌಂಡೇಶನ್‌, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು ಹಾಗೂ ಬೆಂಗಳೂರು ಕಂಬಳ ಸಮಿತಿಯ ಉಪಾಧ್ಯಕ್ಷರೂ ಆಗಿರುತ್ತಾರೆ. ಪರಿಸರವಾದಿಗಳು ಆಗಿರುವ ಇವರು ಬೆಂಗಳೂರು ಮತ್ತು ರಾಜ್ಯದಲ್ಲಿ ಅನೇಕ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಬೆಂಗಳೂರಿನಲ್ಲಿ ಮರಗಳಿಂದ ಕಬ್ಬಿಣದ ರಾಡ್‌ ಮತ್ತು ಮೊಳೆ ತೆಗೆಯುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪರಿಸರ ಪ್ರೇಮಿಗಳಿಗೆ ಹತ್ತಿರವಾಗಿದ್ದರು.

ಇತ್ತೀಚೆಗೆ ನಡೆದ ದೇಶದಲ್ಲೇ ಪ್ರಖ್ಯಾತಿ ಪಡೆದ ಬೆಂಗಳೂರು ಕಂಬಳದ ಆಯೋಜನೆಯ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮತ್ತು ಕರಾವಳಿ ಹಾಗೂ ಬೆಂಗಳೂರಿನ ಜನರ ಪ್ರಶಂಸೆಗೆ ಒಳಗಾಗಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪರಮ ಭಕ್ತರಾಗಿರುವ ಇವರು ಬೆಂಗಳೂರಿನ ತಿಪ್ಪಸಂದ್ರದಲ್ಲಿ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮವನ್ನು ಬಹಳ ವಿಜ್ರಂಭಣೆಯಿಂದ ಮತ್ತು ಸಾವಿರಾರು ಭಕ್ತರಿಗೆ ಅನ್ನದಾನ ಕಾರ್ಯಕ್ರಮದ ನೇತೃತ್ವವನ್ನು ವಹಿಸಿಕೊಂಡು ಬಂದಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಗುಣರಂಜನ್‌ ಶೆಟ್ಟಿಯವರನ್ನು ಅಭಿಮಾನದಿಂದ ಪ್ರೀತಿಯ ಗುಣಣ್ಣ ಎಂದು ಕರೆಯುತ್ತಾರೆ.

ಪ್ರಸ್ತುತ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಆಗಿರುವ ಗುಣರಂಜನ್‌ ಶೆಟ್ಟಿಯವರು ಇದೀಗ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವುದು ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಿಂದ ಆಯ್ಕೆಯಾಗಿರುವುದು ಕರ್ನಾಟಕದ ಜನತೆ ಹೆಮ್ಮೆಪಡುವಂತಾಗಿದೆ.

ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಇವರ ಅವಧಿಯಲ್ಲಿ ಅನೇಕ ಟೂರ್ನಮೆಂಟ್‌ಗಳು ನಡೆದಿದ್ದು, ಅನೇಕ ಕುಸ್ತಿಪಟುಗಳು ಬಹುಮಾನಗಳನ್ನು ಪಡೆದಿರುತ್ತಾರೆ. ಇವರು ಬಂದ ನಂತರ ಕರ್ನಾಟಕ ಕುಸ್ತಿ ಪಟುಗಳಿಗೆ ಆನೆ ಬಲ ಬಂದಂತಾಗಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.