Home » ಕುಂಕುಮ ಇಟ್ಟವರು ಯಾರಾದ್ರೂ ಬಾಂಬ್ ಹಾಕಿದ್ದಾರಾ??? | ಬಾಂಬ್ ಹಾಕುವವರು ಯಾವತ್ತಿದ್ರೂಟೋಪಿ ಹಾಕಿದವರು- ಸಿಟಿ ರವಿ

ಕುಂಕುಮ ಇಟ್ಟವರು ಯಾರಾದ್ರೂ ಬಾಂಬ್ ಹಾಕಿದ್ದಾರಾ??? | ಬಾಂಬ್ ಹಾಕುವವರು ಯಾವತ್ತಿದ್ರೂ
ಟೋಪಿ ಹಾಕಿದವರು- ಸಿಟಿ ರವಿ

0 comments

ಕುಂಕುಮ ಇಟ್ಟವರು ಇಲ್ಲಿಯವರೆಗೆ ಯಾರಾದ್ರೂ ಬಾಂಬ್ ಹಾಕಿದ್ದಾರಾ ?? ಬಾಂಬ್ ಹಾಕುವವರು ಯಾರು ಎಂದರೇ ಟೋಪಿ ಹಾಕಿದವರು ಎಂದು ಸನ್ನೆ ಮಾಡಿ ತೋರಿಸುವ ಮೂಲಕ ಸಿಟಿ ರವಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಖಾಸಗಿ ಕಲ್ಯಾಣಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ದೇಶದಲ್ಲಿ ಭಯೋತ್ಪಾದಕರಿಗೆ ಬಿರಿಯಾನಿ ತಿನಿಸೋ ಕಾಲ ಇತ್ತು. ಹಾಂಗಂತ ಈಗಲೂ ಬಿರಿಯಾನಿ ತಿನ್ನಿಸಬೇಕಾ? ಈಗ ಬಿರಿಯಾನಿ ಗಿರಿಯಾನಿ ಇಲ್ಲ. ಈಗ ಯಾರಾದ್ರೂ ಬಾಲ ಬಿಚ್ಚಿದ್ರೇ ಜೆಸಿಬಿ ಹೋಗುತ್ತೆ. ಬುಲ್ಡೋಜರ್ ಘರ್ಜಿಸುತ್ತೆ. ಈ ರೀತಿ ಮಾಡೋದು ಸರಿನೋ ತಪ್ಪೋ? ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಶ್ನೆ ಮಾಡಿದರು. ಈಗ ಭಯೋತ್ಪಾದನೆ ಮಾಡುವವರಿಗೆ ಬಿರಿಯಾನಿ ತಿನ್ನಿಸಲ್ಲ. ಬಂದೂಕಿನಿಂದ ದಾಳಿ ಮಾಡುವವರಿಗೆ ಸೈನಿಕರ ಬಂದೂಕಿನಿಂದಲೇ ಉತ್ತರ ಕೊಡ್ತೀವಿ. ಸರ್ಜಿಕಲ್ ಸ್ಟ್ರೈಕ್ ಮೂಲಕ ಉತ್ತರ ಕೊಟ್ಟಿದ್ದೇವೆ ಎಂದರು.

ಸಿದ್ದರಾಮಯ್ಯ ಹೇಳ್ತಾರೆ ತಾನು ಹಿಂದೂ ಅಂತ ಆದ್ರೆ ಸಿದ್ದರಾಮಯ್ಯಗೆ ಕೇಸರಿ ಟೋಪಿ ಮಾತ್ರ ಬೇಡ. ನಾನು ಹಿಂದೂ ಆದ್ರೆ ಕೇಸರಿ ಟೋಪಿ ಹಾಕೋಕೆ ಬಂದಾಗ ಏನು ಮಾಡಿದ್ರು? ಕಿತ್ತಾಕಿದ್ರು. ಸಿದ್ದರಾಮಯ್ಯಗೆ ಕುಂಕುಮ ಇಟ್ಟವರ ಕಂಡ್ರೆ ಹೆದರಿಕೆ ಆಗುತ್ತಂತೆ, ನಮ್ಮ ತಾಯಂದಿರು ಕುಂಕುಮ ಇಡ್ತಾರೋ ಇಲ್ವಾ?. ಟೋಪಿ ಕಂಡ್ರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಕೇಸರಿ ಪೇಟಾ ತೊಟ್ಟವರು ಯಾರು ಬಾಂಬ್ ಹಾಕಲಿಲ್ಲ. ಕೇಸರಿ ಶಾಲು ಹಾಕಿದವರು ಭಾರತ್ ಮಾತಾ ಕೀ ಜೈ ಅಂದ್ರು ಎಂದು ಸಿದ್ದರಾಮಯ್ಯ ನಡೆಯನ್ನು ಖಂಡಿಸಿದರು.

ತಪ್ಪು ಮಾಡಿದವರನ್ನು ತಲೆ ಮೇಲೆ ಕೂರಿಸಿಕೊಳ್ಳುವ ಜನ ನಾವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ತಪ್ಪು ಮಾಡಿದವರು ನೀರು ಕುಡಿಯಲೇ ಬೇಕು, ಶಿಕ್ಷೆ ಆಗಲೇ ಬೇಕು. ತಪ್ಪು ಮಾಡಿದರು ವೋಟಿನಾಸೆಗೆ ಓಲೈಸೋ ಕಾಲವಿಲ್ಲ. ತಪ್ಪು ಮಾಡಿದವರು ಬಡವರು, ಶ್ರೀಮಂತರು ಅನ್ನೋ ಪ್ರಶ್ನೆ ಇಲ್ಲ. ಶ್ರೀರಾಮ ನವಮಿಯಂದು ಯಾಕೆ ಕಲ್ಲು ಎಸೆಯುತ್ತಾರೆ. ನಾವು ಏನಾದ್ರು ಅವರ ಮೆರವಣಿಗೆ ವೇಳೆ ಕಲ್ಲು ಹಾಕ್ತೀವಾ? ಎಂದು ಪ್ರಶ್ನೆ ಮಾಡಿದರು.

banner

You may also like

Leave a Comment