Home Karnataka State Politics Updates ಪ್ರಧಾನಿ ಮೋದಿ,ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆಗೈಯುವ ಬೆದರಿಕೆ

ಪ್ರಧಾನಿ ಮೋದಿ,ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆಗೈಯುವ ಬೆದರಿಕೆ

Hindu neighbor gifts plot of land

Hindu neighbour gifts land to Muslim journalist

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡುವುದಾಗಿ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬ ಬರೆದುಕೊಂಡಿದ್ದಾನೆ.

ಈ ಬಗ್ಗೆ ಟ್ವಿಟರ್ ಬಳಕೆದಾರರೊಬ್ಬರು ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರಮೋದ್ ಕುಮಾರ್ ತಿವಾರಿ, ಟ್ವಿಟರ್‌ನಲ್ಲಿ ಪ್ರಧಾನಿ ಮತ್ತು ಮುಖ್ಯಮಂತ್ರಿಯವರಿಗೆ ಬೆದರಿಕೆ ಹಾಕಿರುವ ಬಗ್ಗೆ ನಮ್ಮ ಸಹಾಯವಾಣಿಗೆ ಯಾರೋ ಒಬ್ಬರು ಕರೆ ಮಾಡಿ ಹೇಳಿದ್ದಾರೆ. ಆಗ ವಿಷಯ ತಿಳಿದಿದೆ ಎಂದಿದ್ದಾರೆ.

ಈ ಬಗ್ಗೆ ತನಿಖೆ ಶುರು ಮಾಡಿದ್ದೇವೆ. ಇದು ಕಿಡಿಗೇಡಿಗಳ ಕೃತ್ಯ ಬೇರೆ ಹೆಸರು ನೀಡಿ ಖಾತೆ ತೆರೆಯಲಾಗಿದೆ. ಈಗಾಗಲೇ ತನಿಖೆ ಶುರು ಮಾಡಿದ್ದೇವೆ. ಟ್ವಿಟರ್ ಸಂಸ್ಥೆಗೆ ಈ ಬಗ್ಗೆ ಮಾಹಿ ನೀಡಲಾಗಿದೆ. ಅಲ್ಲಿಂದ ಶೀಘ್ರದಲ್ಲಿ ಆರೋಪಿಯ ಗುರುತು ಪತ್ತೆಯಾಗಲಿದೆ. ಅಧಿಕೃತ ಹೆಸರನ್ನು ತನಿಖೆ ಮುಗಿಯುವವರೆ ಗೆ ಬಹಿರಂಗಪಡಿಸುವುದಿಲ್ಲ.

ಆ ಬಳಕೆದಾರ ಯಾರು ಎಂದು ಕಂಡುಹಿಡಿದು ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ತಿವಾರಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಜತೆಗೆ ಕೆಲವೊಂದು ಆಕ್ಷೇಪಾರ್ಹ ಕಾಮೆಂಟ್‌ಗಳನ್ನೂ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.