Home Karnataka State Politics Updates D. K. Shivakumar :ಲೋಕಸಭಾ ಸಮರ : ಸ್ಕ್ರೀನಿಂಗ್ ಸಮಿತಿ ಸಭೆಯ ನಂತರ ಹೆಚ್ಚಿನ ಅಭ್ಯರ್ಥಿಗಳು...

D. K. Shivakumar :ಲೋಕಸಭಾ ಸಮರ : ಸ್ಕ್ರೀನಿಂಗ್ ಸಮಿತಿ ಸಭೆಯ ನಂತರ ಹೆಚ್ಚಿನ ಅಭ್ಯರ್ಥಿಗಳು ಹೆಸರುಗಳನ್ನು ಅಂತಿಮಗೊಳಿಸಲಾಗುವುದು : ಡಿ. ಕೆ. ಶಿವಕುಮಾರ್

Hindu neighbor gifts plot of land

Hindu neighbour gifts land to Muslim journalist

D.K.Shivakumar :ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಚುನಾವಣಾ ಕಾವು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್(D.K.Shivakumar) ಮಾರ್ಚ್ 11ರಂದು ನಡೆಯುವ ಸ್ಕ್ರೀನಿಂಗ್ ಸಮಿತಿ ಸಭೆಯ ನಂತರ ಮುಂಬರುವ ಲೋಕಸಭಾ ಚುನಾವಣೆಗೆ ಇನ್ನು ಹೆಚ್ಚಿನ ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

 

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನೆನ್ನೆಯ ಪಟ್ಟಿಯಲ್ಲಿ ಇನ್ನೂ ಹೆಚ್ಚಿನ ಹೆಸರುಗಳನ್ನು ಘೋಷಿಸಬೇಕಿತ್ತು. ಆದರೆ ಮಾರ್ಚ್ 11ರಂದು ನಡೆಯುವ ಮುಂದಿನ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಆ ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

 

ಸ್ಥಳೀಯ ನಾಯಕರ ಪ್ರತಿಕ್ರಿಯೆ ಮತ್ತು ನಮ್ಮ ಸಮೀಕ್ಷೆಯ ಮಾಹಿತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.

 

ಎಷ್ಟು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ ಎಂದು ಕೇಳಿದಾಗ, “ನಾನು ಎಷ್ಟು ಹೆಸರುಗಳನ್ನು ದೆಹಲಿಗೆ ಕೊಂಡೊಯ್ದಿದ್ದೇನೆ ಎಂಬುದು ಮುಖ್ಯವಲ್ಲ. ಅದನ್ನು ಹೈ ಕಮಾಂಡ್ ನಿರ್ಧರಿಸುತ್ತದೆ. ನಾವು ಹೆಸರುಗಳನ್ನು ಮಾತ್ರ ಪ್ರಸ್ತಾಪಿಸುತ್ತೇವೆ. ಕಾಂಗ್ರೆಸ್ ಚುನಾವಣಾ ಸಮಿತಿಯು ತನ್ನದೇ ಆದ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಈ ಹಿಂದೆ ಕಾಂಗ್ರೆಸ್ 39 ಲೋಕಸಭಾ ಕ್ಷೇತ್ರಗಳಿಗೆ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದನ್ನೂ ಓದಿ : ಇನ್ನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ -ಡಿ ಕೆ ಶಿವಕುಮಾರ್