HomeKarnataka State Politics UpdatesPM Modi: ಮೋದಿ ಪುಢಾರಿ - ಸಿಎಂ ಸಿದ್ದರಾಮಯ್ಯ ಹೇಳಿಕೆ; ಬಿಜೆಪಿಗರ ಆಕ್ರೋಶ

PM Modi: ಮೋದಿ ಪುಢಾರಿ – ಸಿಎಂ ಸಿದ್ದರಾಮಯ್ಯ ಹೇಳಿಕೆ; ಬಿಜೆಪಿಗರ ಆಕ್ರೋಶ

Hindu neighbor gifts plot of land

Hindu neighbour gifts land to Muslim journalist

PM Modi: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ʼರಾಜಕೀಯ ಪುಢಾರಿʼ ಎಂದು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಹಾಗೂ ʼಸಿದ್ದರಾಮಯ್ಯನವರೇ ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿʼ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಎಚ್ಚರಿಕೆಯ ಮಾತನ್ನು ನೀಡಿದ್ದಾರೆ.

ಈ ದೇಶದ ಪ್ರಧಾನಿಯನ್ನು ಹೇಗೆ ಸಂಬೋಧನೆ ಮಾಡಬೇಕು ಎಂಬುವುದು ನಿಮಗೆ ಗೊತ್ತಿಲ್ಲದೇ ಇರುವುದು ದುರ್ದೈವದ ಸಂಗತಿ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಿಮ್ಮ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಿಮಗೆಲ್ಲಿದೆ ಮೋದಿ ವಿರುದ್ಧ ಮಾತನಾಡುವ ನೈತಿಕತೆ ಎಂದು ತಿರುಗೇಟನ್ನು ನೀಡಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಆಕಾಶಕ್ಕೆ ಉಗಿದರೆ ಅದು ಆಕಾಶಕ್ಕೆ ಮುಟ್ಟಲ್ಲ. ಸೂರ್ಯನಿಗೆ ತಟ್ಟಲ್ಲ. ಉಗಿದವರ ಮುಖಕ್ಕೆ ವಾಪಸ್‌ ಬರುತ್ತೆ. ನೀವು ಮೋದಿಯನ್ನು ಟೀಕೆ ಮಾಡುವುದು ಸೂರ್ಯನಿಗೆ ಉಗಿದಂತೆ. ಅದು ನಿಮ್ಮ ಮುಖಕ್ಕೆ ಮೆತ್ತಿಕೊಳ್ಳೋದು, ನೀವೇ ಮುಖ ತೊಳೆದುಕೊಳ್ಳಬೇಕು ಎಂದು ವ್ಯಂಗವಾಡಿದ್ದಾರೆ.

ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಗ್ಯಾರೆಂಟಿಗಳನ್ನು ಟೀಕಿಸಿದ್ದು, ರಾಜಕೀಯ ಪುಢಾರಿ ರೀತಿ ಮೋದಿಯದು ಸುಳ್ಳು ಆರೋಪ, ಎಲ್ಲವನ್ನೂ ಹಳದಿ ಕನ್ನಡಕದಿಂದ ನೋಡುವುದನ್ನು ಬಿಟ್ಟು ಮುತ್ಸದ್ದಿ ರಾಜಕಾರಣಿಯಾಗಿ ಅರ್ಥ ಮಾಡಿಕೊಳ್ಳಲು ಯತ್ನಿಸಿ ಎಂದು ಹೇಳಿಕೆ ನೀಡಿದ್ದರು.

RELATED ARTICLES

Most Popular

Recent Comments