HomeKarnataka State Politics Updatesಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡನ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ರಾಡ್ ನಿಂದ ದಾಳಿ| ಸ್ಥಳಕ್ಕೆ...

ಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡನ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ರಾಡ್ ನಿಂದ ದಾಳಿ| ಸ್ಥಳಕ್ಕೆ ಪೊಲೀಸರ ದೌಡು

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗ: ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಅವರ ಮಗ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ರಾಡ್‌ನಿಂದ ದಾಳಿ ಮಾಡಿರುವ ಘಟನೆಯೊಂದು ಶಿವಮೊಗ್ಗದ ಸೂಳೆಬೈಲ್ ಸಮೀಪದ ಇಂದಿರಾನಗರದಲ್ಲಿ ನಡೆದಿದೆ.

ಶಿವಮೊಗ್ಗದಿಂದ ಮತ್ತೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಮೂರ್ನಾಲ್ಕು ಜನ ದುಷ್ಕರ್ಮಿಗಳು ಕಾರಿನ ಹಿಂಭಾಗಕ್ಕೆ ರಾಡ್‌ನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.

ರಾತ್ರಿ ಈ ಘಟನೆ ನಡೆದಿರುವುದರಿಂದ ಯಾರು ದಾಳಿ ಮಾಡಿದ್ದಾರೆ, ಉದ್ದೇಶವೇನು ಎಂಬ ಬಗ್ಗೆ ಮಾಹಿತಿ ತಿಳಿದಿಲ್ಲ.

ದಾಳಿ ನಡೆದ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಮತ್ತೂರು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದರಿಂದಾಗಿ ಕೆಲಹೊತ್ತು ಸಂದಿಗ್ಧ ಸ್ಥಿತಿ ನಿರ್ಮಾಣವಾಗಿತ್ತು. ಎಸ್‌ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸೇರಿದಂತೆ ತುಂಗಾನಗರ, ದೊಡ್ಡಪೇಟೆ ಸೇರಿದಂತೆ ವಿವಿಧ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Most Popular

Recent Comments