Home Karnataka State Politics Updates ಯುಪಿಯಲ್ಲಿ ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಓವೈಸಿ ಜನಿವಾರ ಧರಿಸಿ, ಶ್ರೀರಾಮನಾಮ ಜಪ ಮಾಡುತ್ತಾರಂತೆ...

ಯುಪಿಯಲ್ಲಿ ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಓವೈಸಿ ಜನಿವಾರ ಧರಿಸಿ, ಶ್ರೀರಾಮನಾಮ ಜಪ ಮಾಡುತ್ತಾರಂತೆ !!

Hindu neighbor gifts plot of land

Hindu neighbour gifts land to Muslim journalist

ಉತ್ತರಪ್ರದೇಶದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ. ಈ ನಡುವೆ ರಾಜಕೀಯ ಮುಖಂಡರ ಪರಸ್ಪರ ವ್ಯಂಗ್ಯ ಮಾತುಗಳು ಆಗಾಗ ಕೇಳಿಬರುತ್ತಲೇ ಇದೆ. ಹಾಗೆಯೇ ಇದೀಗ ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್​ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ ಶ್ರೀರಾಮನಾಮ ಜಪ ಪ್ರಾರಂಭ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಪಂಚಾಯಿತಿ ರಾಜ್​ ಸಚಿವ ಭೂಪೇಂದ್ರ ಸಿಂಗ್​ ಚೌಧರಿ ಹೇಳಿದ್ದಾರೆ.

ರಾಹುಲ್ ಗಾಂಧಿ ಜನಿವಾರ ಧರಿಸಿದ್ದು, ಅಖಿಲೇಶ್​ ಯಾದವ್ ಹನುಮಾನ್​ ದೇಗುಲಕ್ಕೆ ಭೇಟಿ ಕೊಟ್ಟ ಘಟನೆಗಳಂತೆಯೇ ಓವೈಸಿ ಜನಿವಾರ ಧರಿಸಿ, ರಾಮನಾಮ ಜಪಿಸುವುದೂ ಸೇರಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಖಂಡಿತವಾಗಿಯೂ ನಾನು ಹೇಳಿದ್ದು ಆಗಿಯೇ ಆಗುತ್ತದೆ ಎಂದಿದ್ದಾರೆ. ನಾವು ಬಿಜೆಪಿ ಅಜೆಂಡಾ ಮುಂದುವರಿಸುತ್ತೇವೆ. ನಮ್ಮ ಅಜೆಂಡಾದಿಂದಾಗಿಯೇ ಅಂದು ರಾಹುಲ್​ ಗಾಂಧಿ ಜನಿವಾರ ಹಾಕಿದ್ದು, ಅಖಿಲೇಶ್​ ಯಾದವ್​ ಆಂಜನೇಯ ದೇವಸ್ಥಾನಕ್ಕೆ ಹೋಗಿದ್ದು ಎಂದು ಸಚಿವರು ಹೇಳಿದ್ದಾರೆ.

ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವವರು ರಾಮನ ಅಸ್ತಿತ್ವವನ್ನೇ ಒಪ್ಪಿಕೊಳ್ಳದೆ, ಅವನನ್ನು ಕಾಲ್ಪನಿಕ ಎಂದವರೆಲ್ಲ ಈಗ ಜನಿವಾರ ಧರಿಸುತ್ತಿದ್ದಾರೆ. ದೇಗುಲಗಳಿಗೆ ಭೇಟಿ ಕೊಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ಭೂಪೇಂದ್ರ ಸಿಂಗ್ ಚೌಧರಿ ಅವರು ಮೂಲತಃ ಮೊರಾದಾಬಾದ್​ನವರಾಗಿದ್ದು, ರಾಜ್ಯ ವಿಧಾನಪರಿಷತ್​ ಸದಸ್ಯರಾಗಿದ್ದಾರೆ. ಶಾಮ್ಲಿಯಲ್ಲಿ ನಡೆದ ಯುವಜನರ ಸಮಾವೇಶದಲ್ಲಿ ಈ ಮಾತುಗಳನ್ನಾಡಿದ್ದಾರೆ.