Home » Karnataka Budget -2026: ಹಿಂದೂ ದೇವಾಲಯಗಳಿಗೆ ಸಿದ್ದರಾಮಯ್ಯ ಕೊಟ್ಟ ಕೊಡುಗೆ ಏನು?

Karnataka Budget -2026: ಹಿಂದೂ ದೇವಾಲಯಗಳಿಗೆ ಸಿದ್ದರಾಮಯ್ಯ ಕೊಟ್ಟ ಕೊಡುಗೆ ಏನು?

0 comments

Karnataka Budget -2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಸಿದ್ದು ಬರಪೂರ ಕೊಡುಗೆಗಳನ್ನು ನೀಡಿದ್ದಾರೆ.  ಅಂತೆಯೇ ಅಲ್ಪಸಂಖ್ಯಾತ ಸಮುದಾಯಗಳಿಗೂ ಉತ್ತಮ ಅನುದಾನ ನೀಡಿದ್ದಾರೆ. ಹಾಗಾದರೆ ಇಂದು ದೇವಾಲಯಗಳಿಗೆ ಸಿದ್ದರಾಮಯ್ಯ ಕೊಟ್ಟ ಕೊಡುಗೆಯನ್ನು ನೋಡೋಣ.

* ಸಿದ್ದರಾಮಯ್ಯ ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿಬಿಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ 5 ಕೋಟಿ ರೂ. ಅನುದಾನ ಮೀಸಲಿರಿಸಿದೆ ಘೋಷಣೆ ಮಾಡಿದ್ದಾರೆ.

• ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು 3 ವರ್ಷಗಳಲ್ಲಿ ಪುನರುಜ್ಜೀವನಗೊಳಿಸಲು ʻಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆʼ ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕೆ

5 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಘೋಷಣೆ ಮಾಡಿದರು.

banner

* ದೇವಾಲಯ ಅಭಿವೃದ್ಧಿ ಪ್ರಾಧಿಕಾರ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ಉದ್ದೇಶಿಸಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

• ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ವೃತ್ತದಲ್ಲಿ ಇಲಾಖೆಗೆ ಸೇರಿದ ಬಂಡಿಶೇಷಮ್ಮ ಛತ್ರದ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ (PPP) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

* ವಾರಣಾಸಿಯಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿರುವುರಿಂದ ಹೊಸ ರಾಜ್ಯ ಛತ್ರವನ್ನು ನಿರ್ಮಿಸಲಾಗುವುದು.

* ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸೇರಿದ ಜಾಗದಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿದ್ದು, ಇದರ ನವೀಕರಣವನ್ನು ಕೈಗೊಳ್ಳಲಾಗುವುದು.

* ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡಲಾಗುವುದು.

* ತುಳಜಾಪುರದಲ್ಲಿ ಪ್ರಸ್ತುತ ಇರುವ ಛತ್ರವನ್ನು ಹೊಸದಾಗಿ ನಿರ್ಮಾಣ ಮಾಡಲಾಗುವುದು.

You may also like