ಚಾರ್ ಧಾಮ್ ಯಾತ್ರಿಕರಿಗೆ ಸಿಹಿ ಸುದ್ದಿ
ಅನೇಕರ ಕನಸು ಜೀವನದಲ್ಲಿ ಒಮ್ಮೆ ಚಾರ್ ದಾಮ್ ಯಾತ್ರೆ ಮಾಡುವುದಾಗಿರುತ್ತದೆ. ಮೋಕ್ಷ ಸಾಧನೆಗಾಗಿ ಈ ಯಾತ್ರೆ ಕೈಗೊಳ್ಳುವುದು ಅವಶ್ಯ ಎಂದು ಅನೇಕರು ನಂಬಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಯಾತ್ರೆಗೆ ಭಕ್ತರ ದೈನಿಕ ಮಿತಿಯನ್ನು ನಿಗದಿಪಡಿಸಲಾಗಿದ್ದು, ಪ್ರಸಿದ್ಧ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಉತ್ತರಕಾಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಸೋಮವಾರದಂದು ಯಾತ್ರಿಗಳಿಗೆ ಉಚಿತ ಆರೋಗ್ಯ ಸೇವೆಗೆ ಚಾಲನೆ ನೀಡಿದ್ದು, ಇಂದಿನಿಂದ ಚಾರ್ ಧಾಮ್ ಯಾತ್ರೆ ಅಧಿಕೃತವಾಗಿ ಆರಂಭವಾಗಿದೆ. ಬದರಿನಾಥ 15000, ಕೇದಾರನಾಥ …