ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಸಿಡ್ ದಾಳಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಆಸಿಡ್ ದಾಳಿ ಪ್ರಕರಣ ಮರೆಮಾಚುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ.

ಈ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆಯಸಿಡ್ ಎರಚಿದ್ದಾನೆ.

ಜನತಾ ಅದಕ್ ಹಾಗೂ ಸಂತ್ರಸ್ತ ಸಾಂತ್ರಾ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಸಂತ್ರಸ್ತ ಮೊಬೈಲ್‍ನಲ್ಲಿ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆಯಸಿಡ್ ಎರಚಿದ್ದಾನೆ.

8ಘಟನೆಯಲ್ಲಿ ಸಂತ್ರಸ್ತ ಸಾಂತ್ರಾನ ಮುಖ, ಎದೆ ಗಾಯವಾಗಿದ್ದು, ಶೇ.30ರಷ್ಟು ಸುಟ್ಟಿದೆ. ಸಂತ್ರಸ್ತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜನತಾ ಅದಕ್‍ನನ್ನು ಮೈಸೂರು ಬಳಿ ಪೊಲೀಸರು ಬಂಧಿಸಿದ್ದಾರೆ.

Leave A Reply

Your email address will not be published.