6
Mangaluru: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನ ಮೇ 27 ರಂದು ನಡೆದ ಅಬ್ದುಲ್ ರಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು ಇನ್ನೋರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧನ ಮಾಡಿದ್ದಾರೆ.
ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂಬಾತನನ್ನು ಬಂಟ್ವಾಳ ರಾಯಿ ಎಂಬಲ್ಲಿ ಬಂಧನ ಮಾಡಲಾಗಿದೆ. ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರು ಮಾಡಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ.
ಪೊಲೀಸರು ಈ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧನ ಮಾಡಿದ್ದಾರೆ.
ಇದನ್ನೂ ಓದಿ: Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ!
